Search in ThisBlogಈಬ್ಲಾಗಲ್ಲಿ ವಿಷಯ ಹುಡುಕಿ

Wednesday, June 1, 2016

Esma for police strike read kannadaprabha and vijayvani clippings

Esma for police strike



vijayavani clipping
ಪ್ರತಿಭಟನೆ ನಡೆಸಿದರೆ ಕೆಲಸದಿಂದ ಡಿಸ್ಮಿಸ್
  • ರಾಜ್ಯದ ಎಲ್ಲ ಠಾಣೆಗಳಿಗೆ ಡಿಜಿಪಿ ಸುತ್ತೋಲೆ
ಕೀರ್ತಿನಾರಾಯಣ ಸಿ.
ಬೆಂಗಳೂರು: ಇಲಾಖೆಯನ್ನು ಮುಜುಗರಕ್ಕೆ ಸಿಲುಕಿಸಿ ರಾಜ್ಯ ಪೊಲೀಸರು ಜೂನ್ 4ರಂದು ಹಮ್ಮಿಕೊಂಡಿರುವ ಪ್ರತಿಭಟನೆಯನ್ನು ಹತ್ತಿಕ್ಕಲೇಬೇಕೆಂದು ಪಣತೊಟ್ಟಿರುವ ಸರ್ಕಾರ ಅಂತಿಮವಾಗಿ ವಜಾಸ ಪ್ರಯೋಗಕ್ಕೆ ತೀರ್ಮಾನಿಸಿದೆ.
ಪ್ರತಿಭಟನೆಗೆ ಕರೆ ನೀಡಿರುವ ಜೂನ್ 4ರಂದು ಕರ್ತವ್ಯಕ್ಕೆ ರಜೆ ಹಾಕುವ ಅಥವಾ ಗೈರು ಹಾಜರಾಗುವ ಪೊಲೀಸರ ಮೇಲೆ ಕಾನೂನಿನ ಅಸ ಬಳಸಿಕೊಂಡು ಅವರನ್ನು ವಜಾಗೊಳಿಸಿ ಮನೆಗೆ ಕಳುಹಿಸುವ ಕುರಿತಂತೆ ಪೊಲೀಸ್ ಮಹಾನಿರ್ದೇಶಕ ಓಂಪ್ರಕಾಶ್ ಸೋಮವಾರ ರಾಜ್ಯದ ಎಲ್ಲ ಪೊಲೀಸ್ ಠಾಣೆ ಹಾಗೂ ಜಿಲ್ಲಾ ಎಸ್ಪಿಗಳಿಗೆ ಸುತ್ತೋಲೆ ರವಾನಿಸಿದ್ದಾರೆ.
ಹಳೆಯ ಅಸ್ತ್ರ: 1982ರಲ್ಲಿ ಮುಂಬೈನಲ್ಲಿ ಪ್ರತಿಭಟನೆಗೆ ಸಜ್ಜಾಗಿದ್ದ ಪೊಲೀಸರ ಮೇಲೆ ಪ್ರಯೋಗಿಸಿದ್ದ ಕಾನೂನು ಅಸ್ತ್ರವನ್ನೇ ರಾಜ್ಯದಲ್ಲೂ ಪ್ರಯೋಗಿಸಲು ಅಧಿಕಾರಿಗಳು ಸಜ್ಜಾಗಿದ್ದಾರೆ. ವಿವಿಧ ಬೇಡಿಕೆ ಮುಂದಿಟ್ಟುಕೊಂಡು ಪ್ರತಿಭಟನೆಗೆ ಸಿದ್ಧರಾಗಿದ್ದ 1000 ಕ್ಕೂ ಹೆಚ್ಚು ಪೊಲೀಸರನ್ನು ಪೂರ್ವ ವಿಚಾರಣೆ ಇಲ್ಲದೆ ಆಗಿನ ಮುಂಬೈ ಪೊಲೀಸ್ ಆಯುಕ್ತರು ಮತ್ತು ಜಿಲ್ಲಾ ವರಿಷ್ಠಾಧಿಕಾರಿ ಸೇವೆಯಿಂದ ವಜಾಗೊಳಿಸಿದ್ದರು. ವಜಾ ಆದೇಶ ಪ್ರಶ್ನಿಸಿ ಸಿಬ್ಬಂದಿ ಮುಂಬೈ ಹೈಕೋರ್ಟ್ ಮೆಟ್ಟಿಲೇರಿದ್ದರಾದರೂ ಅರ್ಜಿ ತಿರಸ್ಕೃತವಾಗಿತ್ತು.


ಎಸ್ಪಿಗಳ ಜತೆ ಮಾತುಕತೆ
ನೃಪತುಂಗ ರಸ್ತೆಯಲ್ಲಿರುವ ಡಿಜಿಪಿ ಕಚೇರಿಯಿಂದ ಸೋಮವಾರ ಇಡೀ ದಿನ ರಾಜ್ಯದ ಎಲ್ಲ ಎಸ್ಪಿಗಳ ಜತೆ ವಿಡಿಯೋ ಕಾನರೆನ್ಸ್ ಮೂಲಕ ಡಿಜಿಪಿ ಓಂಪ್ರಕಾಶ್ ಮಾತುಕತೆ ನಡೆಸಿದರು. ರಜೆ ಹಾಕದಂತೆ ಮನವೊಲಿಕೆ ಹಾಗೂ ಕೇಳದಿದ್ದರೆ ನಂತರ ಅನುಸರಿಸಬೇಕಾದ ಕ್ರಮಗಳ ಬಗ್ಗೆ ನಿರ್ದೇಶನ ಕೊಟ್ಟಿದ್ದಾರೆ. ಎಲ್ಲ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರತಿಭಟನೆಯಲ್ಲಿ ಭಾಗವಹಿಸಿದರೆ ಶಿಸ್ತು ಕ್ರಮ ತೆಗೆದುಕೊಳ್ಳಲು ರಾಜ್ಯದ ಎಲ್ಲ ಠಾಣೆಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸುತ್ತೋಲೆ ಕಳುಹಿಸಲಾಗಿದೆ. ಕರ್ತವ್ಯಕ್ಕೆ ರಜೆ ಹಾಕಿ ಅಥವಾ ಗೈರು ಹಾಜರಾಗಿ ಪ್ರತಿಭಟನೆಯಲ್ಲಿ ಭಾಗವಹಿಸಿದರೆ ಅಂಥವರನ್ನು ಸೇವೆಯಿಂದ ವಜಾ ಮಾಡಲಾಗುತ್ತದೆ.
| ಓಂಪ್ರಕಾಶ್ ಡಿಜಿಪಿ

CLICK PHOT&JOIN: Karnataka government employee's News & Order's exchange Teligram GROUP

CLICK PHOT&JOIN: Karnataka government employee's News & Order's exchange Teligram GROUP
ಬಹಳ ಸದಸ್ಯರ ಒತ್ತಾಯದಮೇರೆಗೆ ಗುಂಪಿಗೆ ಮರುಚಾಲನೆ ನೀಡಲಾಗಿದೆ. ಕೆಟ್ಟ=ಟೀಕೆ,ಟಿಪ್ಪಣಿ,ಸ್ವಗತ ಇಲ್ಲಿ ನಿಷೇಧ, ಎಲ್ಲೋ ಕುಳಿತು ನಿಮ್ಮ ಬೆರಳು/ಯೋಚನೆ ಅಡ್ಮಿನ್ ನಿಯಂತ್ರಣ ಮಾಡಲು ಆಗಲ್ಲ, ಚರ್ಚಿಸುವ ಮುಂಚೆ ಯೋಚಿಸಿ ಪೋಸ್ಟ್ ಮಾಡಿ, ನೀವೂ ತೊಂದರೆಗೆ ಸಿಲುಕಬೇಡಿ, ಅಡ್ಮಿನಿಗೂ ತೊಂದರೆ ಕೊಡಬೇಡಿ. ಆರೋಗ್ಯಕರ ಚರ್ಚೆ, ಸಹಾಯ, ಸ್ನೇಹ ಗುಂಪಿನ ಗುರಿ. ಎಲ್ಲರೂ ಭಾಗವಹಿಸಲು ಪೋಸ್ಟ್ ಮಾಡುವ ಅವಕಾಶ ನೀಡಲಾಗಿದೆ. ನಿಯಮ ಮೀರುವ ಸದಸ್ಯರನ್ನು ಮುಲಾಜಿಲ್ಲದೇ ಹೊರಹಾಕಿ ಬ್ಲಾಕ್ ಮಾಡಲಾಗುವುದು ಇದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸುದ್ದಿ ಆದೇಶ ವಿನಿಮಯ ಟೆಲಿಗ್ರಾಂ ಗುಂಪಿನ ಆಹ್ವಾನ ಕೊಂಡಿ. ಮೇಲಿನ ಫೋಟೋ ಬೆರಳಿಂದ ತಟ್ಟುವ ಮುಖಾಂತರ ಗುಂಪಿಗೆ ನೀವೇ ಸೇರ್ಪಡೆ ಆಗಬಹುದು. ತಟ್ಟುವ ಮುಂಚೆ ಟೆಲಿಗ್ರಾಂ ಆಪ್ ಹಾಕಿಕೊಂಡು ತಟ್ಟಿ.