Search in ThisBlogಈಬ್ಲಾಗಲ್ಲಿ ವಿಷಯ ಹುಡುಕಿ

Monday, April 29, 2019

ಅನುಕಂಪ ಆಧಾರದ ನೇಮಕಾತಿಗೆ ವಿದ್ಯಾರ್ಹತೆ ವಿನಾಯ್ತಿ

ಅನುಕಂಪ ಆಧಾರದ ನೇಮಕಾತಿಗೆ ವಿದ್ಯಾರ್ಹತೆ ವಿನಾಯ್ತಿ

ಬೆಂಗಳೂರು: ಗ್ರಾಮ ಪಂಚಾಯಿತಿಗಳಲ್ಲಿ ಖಾಲಿಯಿರುವ ವಾಟರ್‌ವೆುನ್‌ ಹುದ್ದೆಗಳಿಗೆ ಅನುಕಂಪದ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಎದುರಾಗಿದ್ದ ಕನಿಷ್ಠ ವಿದ್ಯಾರ್ಹತೆ ಗೊಂದಲ ಇದೀಗ ದೂರವಾಗಿದೆ.
ಅನುಕಂಪದ ಆಧಾರದಲ್ಲಿ ವಾಟರ್‌ವೆುನ್‌ ಹುದ್ದೆಗಳನ್ನು ನೇಮಕ ಮಾಡಿಕೊಳ್ಳುವಾಗ ನಿಗದಿಯಾಗಿದ್ದ ಕನಿಷ್ಠ ವಿದ್ಯಾರ್ಹತೆಯಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ವಿನಾಯ್ತಿ ನೀಡಿದೆ.
ಅಲ್ಲದೆ, ವಾಟರ್‌ವೆುನ್‌ ಹುದ್ದೆಯ ಜತೆಗೆ ಖಾಲಿ ಇರುವ ಪಂಪ್‌ ಆಪರೇಟರ್‌, ಪಂಪ್‌ ಮೆಕ್ಯಾನಿಕ್‌, ಜವಾನ ಮತ್ತು ಸ್ವತ್ಛತಾಗಾರರ ಹುದ್ದೆಗಳಿಗೆ ಅನುಕಂಪದ ಆಧಾರದಲ್ಲಿ ನೇಮಕಾತಿಗಳನ್ನು ಮಾಡಿಕೊಳ್ಳುವಾಗಲೂ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಬಾರದೆಂದು ಇಲಾಖೆ ಹೇಳಿದೆ.
ಗೊಂದಲ ಏನಿತ್ತು: ಗ್ರಾಪಂ ನೌಕರರು ಸೇವೆಯಲ್ಲಿರುವಾಗಲೇ ಮರಣ ಹೊಂದಿದಲ್ಲಿ ಅವರ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ನೇಮಕವಾಗಲು ಅರ್ಹತೆ ಇದ್ದಲ್ಲಿ ಗ್ರಾಪಂಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಬೇರೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳುವುದು ಬೇಡ.ಅದರ ಬದಲು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅನುಮೋದನೆ ಪಡೆದು ಮರಣ ಹೊಂದಿದ ಅವಲಂಬಿತರನ್ನು ನೇಮಕ ಮಾಡಿಕೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆ 2017ರಲ್ಲಿ ಎಲ್ಲ ಗ್ರಾಪಂಗಳಿಗೆ ನಿರ್ದೇಶನ ನೀಡಿತ್ತು.

ಆದರೆ, ಗ್ರಾಮ ಪಂಚಾಯಿತಿಗಳ ಸಿಬ್ಬಂದಿ ನೇಮಕಾತಿ ಹಾಗೂ ವೇತನ ಶ್ರೇಣಿ ನಿಗದಿಗೆ ಸಂಬಂಧಿಸಿದ 2014ರ ಆದೇಶದ ಪ್ರಕಾರ ವಾಟರ್‌ವೆುನ್‌ ಹುದ್ದೆಗೆ ಕನಿಷ್ಠ ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ ಎಂದು ನಿಗದಿಪಡಿಸಲಾಗಿತ್ತು.

ಹಾಗಾಗಿ, ಅನುಕಂಪದ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವಾಗ, ಹುದ್ದೆಗೆ ಬೇಕಾದ ಕನಿಷ್ಠ ವಿದ್ಯಾರ್ಹತೆ ಇಲ್ಲದೆ ಇದ್ದಲ್ಲಿ ಅವರಿಗೆ ಯಾವ ಹುದ್ದೆ ನೀಡಬೇಕೆಂಬ ಬಗ್ಗೆ ಗೊಂದಲ ನಿರ್ಮಾಣವಾಗಿ ಈ ಬಗ್ಗೆ ಹಲವು ಜಿಲ್ಲಾ ಪಂಚಾಯಿತಿಗಳು ಇಲಾಖೆಯಿಂದ ಮಾರ್ಗದರ್ಶನ ಬಯಸಿದ್ದರು. ಆ ಗೊಂದಲವನ್ನು ಇಲಾಖೆ ಈಗ ಬಗೆಹರಿಸಿದೆ.

ಕರ್ನಾಟಕ ನಾಗರಿಕ ಸೇವೆಗಳ (ಅನುಕಂಪ ಆಧಾರದಲ್ಲಿ ನೇಮಕಾತಿ) ನಿಯಮಗಳು 1996ರ ನಿಯಮ 4(3) ಪ್ರಕಾರ ರಾಜ್ಯ ಸಿವಿಲ್‌ ಸೇವೆಗೆ ಸೇರಿದ “ಡಿ’ ಗ್ರೂಪ್‌ ಹುದ್ದೆಗೆ ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡಲು ಕನಿಷ್ಠ ವಿದ್ಯಾರ್ಹತೆಯಿಂದ ವಿನಾಯ್ತಿ ನೀಡಲಾಗಿದೆ.

ಅದೇ ರೀತಿ, ಗ್ರಾಪಂಗಳ ನೌಕರರು ಮರಣ ಹೊಂದಿದಾಗ ಅವರ ಅವಲಂಬಿತರನ್ನು ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳುವಂತೆ ಎಲ್ಲ ಗ್ರಾಪಂಗಳಿಗೆ ನಿರ್ದೇಶಿಸಲಾಗಿದೆ.

ಇಲಾಖೆ ನೀಡಿರುವ ನಿರ್ದೇಶನದಂತೆ ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಮಂಜೂರು ಆಗಿರುವ ಬಿಲ್‌ ಕಲೆಕ್ಟರ್‌, ಕ್ಲರ್ಕ್‌ ಕಂ ಡಾಟಾ ಎಂಟ್ರಿ ಆಪರೇಟರ್‌ ಹುದ್ದೆಗಳನ್ನು “ಸಿ’ ಹುದ್ದೆಗಳೆಂದು ಪರಿಗಣಿಸಿ ಅವುಗಳಿಗೆ ನಿಗದಿಪಡಿಸಿರುವ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ ನೇಮಕಾತಿ ಮಾಡಿಕೊಳ್ಳಬೇಕು.

ಅದೇ ರೀತಿ, ವಾಟರ್‌ವೆುನ್‌, ಪಂಪ್‌ ಆಪರೇಟರ್‌, ಪಂಪ್‌ ಮೆಕ್ಯಾನಿಕ್‌, ಜವಾನ ಮತ್ತು ಸ್ವತ್ಛತಾಗಾರರ ಹುದ್ದೆಗಳನ್ನು “ಡಿ’ ಗ್ರೂಪ್‌ ಹುದ್ದೆಗಳೆಂದು ಪರಿಗಣಿಸಿ, ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸದೆ ಖಾಲಿಯಿರುವ ಹುದ್ದೆಗಳಿಗೆ ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಬೇಕೆಂದು ಇತ್ತೀಚೆಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಸುತ್ತೋಲೆ ಹೊರಡಿಸಿದೆ.

ಸರ್ಕಾರದ ಈ ತೀರ್ಮಾನದಿಂದ ಅನುಕಂಪದ ಆಧಾರದ ನೇಮಕಾತಿಗಳಿಗೆ ಬಹಳ ಅನುಕೂಲವಾಗಿದೆ. ಆದರೆ, ಬಿಲ್‌ ಕಲೆಕ್ಟರ್‌, ಕ್ಲರ್ಕ್‌ ಕಂ ಡಾಟಾ ಎಂಟ್ರಿ ಆಪರೇಟರ್‌ ಹುದ್ದೆಗಳನ್ನು ಗ್ರೂಪ್‌ “ಸಿ’ ಹುದ್ದೆ ಎಂದು ಮತ್ತು ವಾಟರ್‌ವೆುನ್‌, ಪಂಪ್‌ ಆಪರೇಟರ್‌, ಜವಾನ, ಸ್ವತ್ಛತಾಗಾರ ಹುದ್ದೆಗಳನ್ನು “ಡಿ’ ಗ್ರೂಪ್‌ ಎಂದು ಪರಿಗಣಿಸಬೇಕೆಂದು ಸರ್ಕಾರ ಹೇಳಿರುವುದು ಅನುಕಂಪದ ನೇಮಕಾತಿಗಳಿಗೆ ಮಾತ್ರ ಅನ್ವಯವಾಗುತ್ತದೆ. ಹಾಗಂತ ಈ ಹುದ್ದೆಗಳೇ “ಸಿ’ ಮತ್ತು “ಡಿ’ ವೃಂದಕ್ಕೆ ಮೇಲ್ದರ್ಜೆಗೇರಿವೆ ಎಂದರ್ಥವಲ್ಲ.
-ಮಾರುತಿ ಮಾನ್ಪಡೆ, ಅಧ್ಯಕ್ಷರು, ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ.

* ರಫೀಕ್‌ ಅಹ್ಮದ್‌

Thursday, April 25, 2019

Paperless dept

ಮೇ 1 ರಿಂದಲೇ ಜಾರಿ l ಕಾಗದ ರಹಿತವಾಗಲಿದೆ ಸಾರ್ವಜನಿಕ ಶಿಕ್ಷಣ ಇಲಾಖೆ

ಶಿಕ್ಷಣ ಇಲಾಖೆಯ ಎಲ್ಲ ಸೇವೆ ಆನ್‌ಲೈನ್‌ಗೆ

ಪ್ರಜಾವಾಣಿ ವಾರ್ತೆ
ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಸಂಪೂರ್ಣ ಡಿಜಿಟಲೀಕರಣ ಆಗುವತ್ತ ಮಹತ್ವದ ಹೆಜ್ಜೆ ಇಟ್ಟಿದೆ. ಇದರಿಂದ ಇಲಾಖೆ ಕಾಗದ ಮುಕ್ತ
ವಾಗಲಿದ್ದು, ಪ್ರತಿಯೊಂದು ಸೇವೆಯೂ ಇನ್ನು ಮುಂದೆ ಆನ್‌ಲೈನ್‌ನಲ್ಲೇ ಲಭ್ಯವಾಗಲಿದೆ.
ಇಲಾಖೆಯ ಗ್ರೂಪ್‌ ‘ಎ’ ಮತ್ತು ‘ಬಿ‘ ದರ್ಜೆಯ ಅಧಿಕಾರಿಗಳು ಹಾಗೂ ಬೋಧಕ ಮತ್ತು ಬೋಧಕೇತರ ವೃಂದದ ನೌಕರರ ಸೇವಾ ಸೌಲಭ್ಯ
ಗಳನ್ನು ಆನ್‌ಲೈನ್‌ ಮೂಲಕವೇ ಒದಗಿಸುವ ಸಂಬಂಧ ಸುತ್ತೋಲೆ ಹೊರಡಿಸಿದ್ದು, ಮೇ 1ರಿಂದ ಹೊಸ ವ್ಯವಸ್ಥೆ ಜಾರಿಗೆ ಬರಲಿದೆ.
‘ಇಲಾಖೆ ದೊಡ್ಡದಾಗಿ ಬೆಳೆದಿದ್ದು, ಸಿಬ್ಬಂದಿ ಸಂಖ್ಯೆ ಹೆಚ್ಚಾಗಿರುವುದರಿಂದ ಹಾಲಿ ವ್ಯವಸ್ಥೆಯಲ್ಲಿ ಎಲ್ಲ ರೀತಿಯ ಸೇವೆಗಳನ್ನು ತ್ವರಿತಗತಿಯಲ್ಲಿ ನೀಡಲು ಸಾಧ್ಯವಾಗುತ್ತಿಲ್ಲ. ವಿವಿಧ ಹಂತ
ಗಳಲ್ಲಿ ನಿಯಂತ್ರಣಾಧಿಕಾರಿಗಳ ಮೂಲಕ ಇಲಾಖಾ ಮುಖ್ಯಸ್ಥರಿಗೆ ಹಾಗೂ ಕೆಲವು ಸೌಲಭ್ಯಗಳನ್ನು ಪಡೆಯಲು ಸರ್ಕಾರಕ್ಕೆ ಮನವಿ ಸಲ್ಲಿಸಿ, ಅನುಮತಿ ಪಡೆಯಬೇಕಾಗಿದೆ. ಕಾರ್ಯಭಾರದ ಕಾರಣಗಳಿಂದ ಅನುಮತಿ ನೀಡು
ವುದು ವಿಳಂಬವಾಗುತ್ತಿದೆ. ಇದರಿಂದ ಅಧಿಕಾರಿಗಳಿಗೆ ಆಡಳಿತ ಮತ್ತು 
ಕಚೇರಿ ಸಿಬ್ಬಂದಿ ವರ್ಗದವರಿಗೆ ದೈನಂದಿನ ಕಾರ್ಯಗಳ ಮೇಲೆ 
ವ್ಯತಿರಿಕ್ತ ಪರಿಣಾಮ ಉಂಟಾಗು
ತ್ತದೆ’ ಎಂದು ಇಲಾಖೆ ಮೂಲಗಳು ತಿಳಿಸಿವೆ.
ಎಲ್ಲ ಸೌಲಭ್ಯಗಳನ್ನೂ ಆನ್‌ಲೈನ್‌ ಮೂಲಕ ನೀಡಲು ಅಗತ್ಯವಿರುವ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ. ಆಡಳಿತದಲ್ಲಿ ಪಾರದರ್ಶಕತೆ ಮತ್ತು ಮಿತವ್ಯಯ ಸಾಧಿಸಲು ಅನುಕೂಲ
ವಾಗಲಿದೆ ಎಂದು ಮೂಲಗಳು ಹೇಳಿವೆ.
ಅಧಿಕಾರಿಗಳ ಪ್ರವಾಸ ದಿನಚರಿ ನಿರ್ವಹಣೆ: ಶಾಲೆಗಳು, ಶಿಕ್ಷಕರ ತರಬೇತಿ ಕೇಂದ್ರಗಳು ಮತ್ತು ಪ್ರಮುಖ ಕಾರ್ಯಕ್ರಮಗಳ ಮೇಲುಸ್ತುವಾರಿ
ಗಾಗಿ ಅಧಿಕಾರಿಗಳು ಪ್ರವಾಸ ಕೈಗೊಳ್ಳಬೇಕಾಗಿದೆ. ಪ್ರತಿ ತಿಂಗಳ 28ನೇ ತಾರೀಕಿನ ಒಳಗೆ ಪ್ರವಾಸ ಪಟ್ಟಿ ತಯಾರಿಸಿ ಅನುಮೋದನೆ ಪಡೆದುಕೊಳ್ಳಬೇಕು. ಅಲ್ಲದೆ, ಪ್ರವಾಸ ದಿನಚರಿಯನ್ನು ದಾಖಲೆಗಳೊಂದಿಗೆ ನಿಯಂತ್ರಣಾಧಿಕಾರಿಗಳಿಗೆ ಪ್ರತಿ ತಿಂಗಳ 5ನೇ ತಾರೀಕಿನ ಒಳಗೆ ನೀಡಬೇಕು. ಈ ಸಂಬಂಧ ಪ್ರಕ್ರಿಯೆ
ಗಳನ್ನು ಸರಳೀಕರಿಸಲು ಹಾಗೂ ತ್ವರಿತ
ಗೊಳಿಸಲು ಆನ್‌ಲೈನ್‌ ಮೂಲಕವೇ ವ್ಯವಹರಿಸಬೇಕು.
ಕೆಸಿಎಸ್‌ಆರ್‌ ನಿಯಮದಂತೆ 10 ವರ್ಷಗಳ ಕಾಲ ಮಿತಿ ವೇತನ ಬಡ್ತಿ, 15 ವರ್ಷ ಸ್ವಯಂಚಾಲಿತ ವೇತನ ಬಡ್ತಿ, 20, 25, 30 ವರ್ಷಗಳ ಹೆಚ್ಚುವರಿ ವೇತನ ಬಡ್ತಿ ಹಾಗೂ ಸ್ಥಗಿತ ವೇತನ ಬಡ್ತಿ, ಹೆಚ್ಚುವರಿ ವೇತನ ಬಡ್ತಿ, ವಿಶೇಷ ವೇತನ ಬಡ್ತಿ, ಅಂಗವಿಕಲ ಬಡ್ತಿ ವಿಚಾರ
ಗಳನ್ನು ಆನ್‌ಲೈನ್‌ ಮೂಲಕವೇ 
ಇತ್ಯರ್ಥಪಡಿಸಲಾಗುವುದು.
ಆನ್‌ಲೈನ್‌ನಲ್ಲಿ ಯಾವ ಸೇವೆ ಲಭ್ಯ
ವಿವಿಧ ರಜಾ ಸೌಲಭ್ಯಗಳು, ಪಾಸ್‌ಪೋರ್ಟ್‌ ಪಡೆಯಲು ಮತ್ತು ವಿದೇಶ ಪ್ರವಾಸಕ್ಕೆ ನಿರಾಕ್ಷೇಪಣಾ ಪತ್ರ, ಶಿಸ್ತು ಪ್ರಕರಣಗಳು ಮತ್ತು ದೂರುಗಳ 
ಸಲ್ಲಿಕೆ. ಪ್ರಭಾರ ಭತ್ಯೆ, ಅಧಿಕಾರಿಗಳ ಪ್ರವಾಸ ದಿನಚರಿ ನಿರ್ವಹಣೆ, ಅರ್ಹತಾದಾಯಕ ಸೇವೆ ಸೇರ್ಪಡೆಗೆ ಅನುಮೋದನೆ. ಕಾಲಮಿತಿ ವೇತನ 
ಬಡ್ತಿ, ಸ್ವಯಂ ಚಾಲಿತ ವೇತನ ಬಡ್ತಿ, ಹೆಚ್ಚುವರಿ ಬಡ್ತಿ, ಸ್ಥಗಿತ ವೇತನ ಬಡ್ತಿ, ಚರಾಸ್ತಿ ಮತ್ತು ಸ್ಥಿರಾಸ್ತಿ ಖರೀದಿಗೆ ಅನುಮತಿ. ಉನ್ನತ ವ್ಯಾಸಂಗಕ್ಕೆ ಮಂಜೂರಾತಿ ಸೇರಿ ಎಲ್ಲ ಸೇವೆ ಮತ್ತು ವ್ಯವಹಾರಗಳನ್ನೂ ಆನ್‌ಲೈನ್‌ ಮೂಲಕವೇ ನಡೆಸಬೇಕು.

CLICK PHOT&JOIN: Karnataka government employee's News & Order's exchange Teligram GROUP

CLICK PHOT&JOIN: Karnataka government employee's News & Order's exchange Teligram GROUP
ಬಹಳ ಸದಸ್ಯರ ಒತ್ತಾಯದಮೇರೆಗೆ ಗುಂಪಿಗೆ ಮರುಚಾಲನೆ ನೀಡಲಾಗಿದೆ. ಕೆಟ್ಟ=ಟೀಕೆ,ಟಿಪ್ಪಣಿ,ಸ್ವಗತ ಇಲ್ಲಿ ನಿಷೇಧ, ಎಲ್ಲೋ ಕುಳಿತು ನಿಮ್ಮ ಬೆರಳು/ಯೋಚನೆ ಅಡ್ಮಿನ್ ನಿಯಂತ್ರಣ ಮಾಡಲು ಆಗಲ್ಲ, ಚರ್ಚಿಸುವ ಮುಂಚೆ ಯೋಚಿಸಿ ಪೋಸ್ಟ್ ಮಾಡಿ, ನೀವೂ ತೊಂದರೆಗೆ ಸಿಲುಕಬೇಡಿ, ಅಡ್ಮಿನಿಗೂ ತೊಂದರೆ ಕೊಡಬೇಡಿ. ಆರೋಗ್ಯಕರ ಚರ್ಚೆ, ಸಹಾಯ, ಸ್ನೇಹ ಗುಂಪಿನ ಗುರಿ. ಎಲ್ಲರೂ ಭಾಗವಹಿಸಲು ಪೋಸ್ಟ್ ಮಾಡುವ ಅವಕಾಶ ನೀಡಲಾಗಿದೆ. ನಿಯಮ ಮೀರುವ ಸದಸ್ಯರನ್ನು ಮುಲಾಜಿಲ್ಲದೇ ಹೊರಹಾಕಿ ಬ್ಲಾಕ್ ಮಾಡಲಾಗುವುದು ಇದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸುದ್ದಿ ಆದೇಶ ವಿನಿಮಯ ಟೆಲಿಗ್ರಾಂ ಗುಂಪಿನ ಆಹ್ವಾನ ಕೊಂಡಿ. ಮೇಲಿನ ಫೋಟೋ ಬೆರಳಿಂದ ತಟ್ಟುವ ಮುಖಾಂತರ ಗುಂಪಿಗೆ ನೀವೇ ಸೇರ್ಪಡೆ ಆಗಬಹುದು. ತಟ್ಟುವ ಮುಂಚೆ ಟೆಲಿಗ್ರಾಂ ಆಪ್ ಹಾಕಿಕೊಂಡು ತಟ್ಟಿ.