Search in ThisBlogಈಬ್ಲಾಗಲ್ಲಿ ವಿಷಯ ಹುಡುಕಿ

Saturday, February 8, 2020

Reservation reg

ನೇಮಕಾತಿ, ಬಡ್ತಿಯಲ್ಲಿ ಮೀಸಲಾತಿ ರಾಜ್ಯದ ವಿವೇಚನಾಧಿಕಾರ: ಸುಪ್ರೀಂ ಕೋರ್ಟ್‌

ಮೀಸಲು ಮೂಲಭೂತ ಹಕ್ಕಲ್ಲ


ಸುಪ್ರೀಂ ಕೋರ್ಟ್‌
ಪ್ರಜಾವಾಣಿ ವಾರ್ತೆ
ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ಯೋಗಿಗಳಿಗೆ ಬಡ್ತಿಯಲ್ಲಿ ರಾಜ್ಯ ಸರ್ಕಾರವು ಮೀಸ
ಲಾತಿ ನೀಡಲೇಬೇಕು ಎಂದಿಲ್ಲ. ಅದು ರಾಜ್ಯ ಸರ್ಕಾರದ ವಿವೇಚನಾಧಿ
ಕಾರ. ಮೀಸಲಾತಿಯು ಮೂಲಭೂತ ಹಕ್ಕು ಎಂದು ಯಾವುದೇ ವ್ಯಕ್ತಿ
ಪ್ರತಿಪಾದಿಸುವಂತಿಲ್ಲ ಎಂಬ ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದೆ.
ಸರ್ಕಾರದ ಹುದ್ದೆಗಳಿಗೆ ನೇಮಕ ಮಾಡುವಾಗ ಮತ್ತು ಬಡ್ತಿ ನೀಡುವಾಗ ಮೀಸಲಾತಿ ಒದಗಿಸುವ ಅಗತ್ಯ ಇದೆಯೇ ಎಂಬುದನ್ನು ರಾಜ್ಯ ಸರ್ಕಾರ ನಿರ್ಧರಿಸ
ಬಹುದು ಎಂದು ನ್ಯಾಯಮೂರ್ತಿ
ಗಳಾದ ಎಲ್‌.ನಾಗೇಶ್ವರ ರಾವ್‌ ಮತ್ತು ಹೇಮಂತ್‌ ಗುಪ್ತಾ ಅವರ ಪೀಠವು ಶುಕ್ರವಾರ ಹೇಳಿದೆ. 
‘ಈ ನ್ಯಾಯಾಲಯವು ಹಿಂದೆ ನೀಡಿದ್ದ ತೀರ್ಪುಗಳ ಪ್ರಕಾರ, ಮೀಸಲಾತಿ ನೀಡುವುದು ರಾಜ್ಯ ಸರ್ಕಾರಗಳ ಬದ್ಧತೆ ಅಲ್ಲ. ಈ ವಿಚಾರ
ದಲ್ಲಿ ಯಾವುದೇ ಗೊಂದಲ ಇಲ್ಲ. ಬಡ್ತಿಯಲ್ಲಿ ಮೀಸಲಾತಿ ಕೊಡಬೇಕು ಎಂಬುದು ವ್ಯಕ್ತಿಯ ಮೂಲಭೂತ ಹಕ್ಕು ಅಲ್ಲ. ಮೀಸಲಾತಿ ಒದಗಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನ್ಯಾಯಾಲಯವು ನಿರ್ದೇಶನ ನೀಡುವುದು ಸಾಧ್ಯವಿಲ್ಲ’ ಎಂದು ಪೀಠವು ಹೇಳಿದೆ. 
ಸುಪ್ರೀಂ ಕೋರ್ಟ್‌ ಈ ಹಿಂದೆ ನೀಡಿದ್ದ ತೀರ್ಪುಗಳ ಆಧಾರದಲ್ಲಿ ಈ ನಿಲುವಿಗೆ ಪೀಠವು ಬಂದಿದೆ. ಇಂದ್ರಾ ಸಾಹ್ನಿ (1992), ಎಂ. ನಾಗರಾಜ್‌ (2006), ಜರ್ನೈಲ್‌ ಸಿಂಗ್‌ (2018) ಮತ್ತು ಸುರೇಶ್‌ ಚಂದ್‌ ಗೌತಮ್‌ (2016) ಪ್ರಕರಣಗಳನ್ನು ಉಲ್ಲೇಖಿಸಿ ತೀರ್ಪು ನೀಡಲಾಗಿದೆ. ಬಡ್ತಿಯಲ್ಲಿ ಮೀಸಲಾತಿ ಒದಗಿಸಬೇಕು ಎಂದು ಉತ್ತರಾಖಂಡ ಹೈಕೋರ್ಟ್‌ 2019ರ ಜುಲೈ 15ರಂದು ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್‌ ರದ್ದು ಮಾಡಿದೆ.
ಸರ್ಕಾರದ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸೇರಿದ ಜನರ ಪ್ರಾತಿನಿಧ್ಯ ಅಗತ್ಯ ಪ್ರಮಾಣ
ದಲ್ಲಿ ಇಲ್ಲ ಎಂಬುದು ಸರ್ಕಾರದ
ಅಭಿಪ್ರಾಯವಾಗಿದ್ದರೆ, ಈ ಸಮುದಾಯ
ಗಳಿಗೆ ಮೀಸಲಾತಿ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಬಹುದು. ನೇಮಕಾತಿ ಮತ್ತು ಬಡ್ತಿಯಲ್ಲಿ ಮೀಸಲಾತಿ ನೀಡುವ ನಿರ್ಧಾರ ಕೈಗೊಳ್ಳುವ ಅಧಿಕಾರ
ವನ್ನು ಸಂವಿಧಾನದ 16 (4) ಮತ್ತು 16 (4–ಎ) ವಿಧಿಗಳು ರಾಜ್ಯ ಸರ್ಕಾರಕ್ಕೆ ನೀಡುತ್ತವೆ ಎಂದು ತೀರ್ಪಿನಲ್ಲಿ ವಿವರಿಸಲಾಗಿದೆ. 
ಉತ್ತರಾಖಂಡದ ಲೋಕೋಪ
ಯೋಗಿ ಇಲಾಖೆಯಲ್ಲಿ ಇನ್ನು ಮುಂದೆ ನೇಮಿಸಿಕೊಳ್ಳಲಾಗುವ ಸಹಾಯಕ ಎಂಜಿನಿಯರ್‌ಗಳ ಎಲ್ಲ ಹುದ್ದೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸೇರಿದವರನ್ನೇ ಆಯ್ಕೆ ಮಾಡಬೇಕು ಎಂದೂ ಉತ್ತರಾಖಂಡ ಹೈಕೋರ್ಟ್‌ ಆದೇಶ ನೀಡಿತ್ತು. ಈ ಆದೇಶ ಸಮರ್ಥನೀಯ ಅಲ್ಲವೇ ಅಲ್ಲ ಎಂದು ಸುಪ್ರೀಂ ಕೋರ್ಟ್‌ನ ಪೀಠ ಹೇಳಿದೆ.
ಸರ್ಕಾರದ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಪ್ರಾತಿನಿಧ್ಯವು ಬೇಕಾದ ಪ್ರಮಾಣದಲ್ಲಿ ಇದೆ ಎಂಬುದನ್ನು ದತ್ತಾಂಶ ಸಂಗ್ರಹದ ಮೂಲಕ ಮನವರಿಕೆ ಮಾಡಿ
ಕೊಂಡ ಬಳಿಕ ಮಾತ್ರ ಮೀಸಲಾತಿ ನೀಡುವುದಿಲ್ಲ ಎಂದು ನಿರ್ಧರಿಸುವ ಅಧಿಕಾರ ರಾಜ್ಯಕ್ಕೆ ಇದೆ ಎಂದು ಉತ್ತರಾಖಂಡದ ಪರಿಶಿಷ್ಟ ಜಾತಿ/ಪಂಗಡಗಳ ನೌಕರರು ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದ್ದರು.
ಬಡ್ತಿಯಲ್ಲಿ ಮೀಸಲಾತಿ ನೀಡು
ವುದಿಲ್ಲ ಎಂಬ ನಿರ್ಧಾರವನ್ನು ಪ್ರಜ್ಞಾಪೂರ್ವಕವಾಗಿಯೇ ಉತ್ತರಾಖಂಡ ರಾಜ್ಯ ಸರ್ಕಾರ ಕೈಗೊಂಡಿದೆ. ಹಾಗಾಗಿ, ಸರ್ಕಾರಿ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸೇರಿದವರು ಅಗತ್ಯ ಪ್ರಮಾಣದಲ್ಲಿ ಇದ್ದಾರೆಯೇ ಎಂಬ ಮಾಹಿತಿಯನ್ನು ರಾಜ್ಯ ಸರ್ಕಾರವು ಸಂಗ್ರಹಿಸುವ ಅಗತ್ಯ ಇಲ್ಲ. 
ಬಡ್ತಿಯಲ್ಲಿ ಮೀಸಲಾತಿ ನೀಡುವುದು ರಾಜ್ಯ ಸರ್ಕಾರದ ಹೊಣೆಗಾರಿಕೆ ಅಲ್ಲ. ಆದ್ದರಿಂದ ಸರ್ಕಾರಿ ಸೇವೆಯಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಪ್ರಾತಿನಿಧ್ಯ ಅಗತ್ಯ ಪ್ರಮಾಣದಲ್ಲಿ ಇದೆ ಎಂಬ ದಾಖಲೆಗಳನ್ನು ತೋರಿಸಿ ತನ್ನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವ ಅಗತ್ಯವೂ ರಾಜ್ಯಕ್ಕೆ ಇಲ್ಲ. 
ಸರ್ಕಾರಿ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಜನರ ಪ್ರಾತಿನಿಧ್ಯ ಅಗತ್ಯ ಪ್ರಮಾಣದಲ್ಲಿ ಇಲ್ಲ ಎಂಬುದನ್ನು ನ್ಯಾಯಾಲಯದ ಗಮನಕ್ಕೆ ತಂದರೂ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದೂ ನ್ಯಾಯಪೀಠ ಹೇಳಿದೆ.
ಪೀಠವು ಹೇಳಿದ್ದೇನು?
l ವಿಧಿ 16 (4) ಮತ್ತು (4 ಎ): ಪ್ರಾತಿನಿಧ್ಯ ಬೇಕಾದಷ್ಟು ಪ್ರಮಾಣದಲ್ಲಿ ಇದೆಯೇ ಇಲ್ಲವೇ ಎಂಬುದನ್ನು ನಿರ್ಧರಿಸುವುದು ರಾಜ್ಯ ಸರ್ಕಾರದ ಕೆಲಸ ಎಂದು ಸ್ಪಷ್ಟವಾಗಿ ಹೇಳುತ್ತದೆ
l ಆಯೋಗ ಅಥವಾ ಸಮಿತಿ, ವ್ಯಕ್ತಿ ಅಥವಾ ಪ್ರಾಧಿಕಾರದ ಮೂಲಕ ಸಂಗ್ರಹಿಸಿದ ದತ್ತಾಂಶದ ಆಧಾರದಲ್ಲಿ ರಾಜ್ಯವು ತನ್ನ ನಿಲುವನ್ನು ರೂಪಿಸಿಕೊಳ್ಳಬಹುದು
l ಸರ್ಕಾರದ ಹುದ್ದೆಗಳಲ್ಲಿ ನೀಡಿದ ಮೀಸಲಾತಿಯನ್ನು ಸಮರ್ಥಿಸಿಕೊಳ್ಳಲು ಪ್ರಾತಿನಿಧ್ಯದ ಕೊರತೆಯ ದತ್ತಾಂಶವನ್ನು ರಾಜ್ಯವು ಬಳಸಿಕೊಳ್ಳಬಹುದು
l ಪ್ರಾತಿನಿಧ್ಯ ಕೊರತೆಯ ದತ್ತಾಂಶವು ಮೀಸಲಾತಿ ನೀಡುವುದಕ್ಕೆ ಇರುವ ಸಮರ್ಥನೆ. ಮೀಸಲಾತಿ ನೀಡುವುದಿಲ್ಲ ಎಂದು ರಾಜ್ಯವು ನಿರ್ಧರಿಸಿದರೆ, ಇಂತಹ ದತ್ತಾಂಶವನ್ನು ಸರ್ಕಾರ ಸಂಗ್ರಹಿಸುವ ಅಗತ್ಯ ಇಲ್ಲ

Wednesday, February 5, 2020

15 CL for selected employees

ನಾಲ್ಕನೆಯ ಶನಿವಾರದ ರಜೆ ಪಡೆಯುವವರು 10 ಸಾಂದರ್ಭಿಕ ರಜೆ ಪಡೆಯಲಿದ್ದಾರೆ

Wednesday, January 29, 2020

Teacher's transfer reg

ಕರಡು ಸಿದ್ಧ: ಶಿಕ್ಷಕರ ಸಂಘದ ಪದಾಧಿಕಾರಿಗಳಿಗೆ ಇದ್ದ ವಿಶೇಷ ವಿನಾಯಿತಿ ರದ್ದು

ಶಿಕ್ಷಕರ ವರ್ಗ: ನಿಯಮ ಸರಳ


ಪ್ರಜಾವಾಣಿ ವಾರ್ತೆ
ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಕ್ಷಕರ ವರ್ಗಾವಣೆ ವಿಷಯದಲ್ಲಿ ಎದುರಾಗಿದ್ದ ಗೊಂದಲಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ನೂತನ ಕರಡು ನಿಯಮವನ್ನು ಸರ್ಕಾರ ರೂಪಿಸಿದ್ದು, ‘ಕಡ್ಡಾಯ’ದ ಬದಲು ‘ವಲಯ ವರ್ಗಾವಣೆ’ ಪದ ಬಳಕೆ, ಸಂಘದ ಪದಾಧಿಕಾರಿಗಳಿಗೆ ನೀಡಿದ್ದ ವಿನಾಯಿತಿ ರದ್ದುಗೊಳಿಸುವ ಪ್ರಸ್ತಾವ ಮುಂದಿಡಲಾಗಿದೆ.
50 ವರ್ಷ ಮೇಲ್ಪಟ್ಟ ಶಿಕ್ಷಕಿಯರು, 55 ವರ್ಷ ತುಂಬಿದ ಶಿಕ್ಷಕರಿಗೆ ಹಾಗೂ ಈಗಾಗಲೇ ‘ಸಿ’ ವಲಯದಲ್ಲಿ 10 ವರ್ಷ ಕಾರ್ಯನಿರ್ವಹಿಸಿದವರಿಗೆ ವಲಯ ವರ್ಗಾವಣೆಯಿಂದ ವಿನಾಯಿತಿ ನೀಡಲು ನಿರ್ಧರಿಸಲಾಗಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‌ ಕುಮಾರ್‌ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಮಾಲೋಚನಾ ಸಭೆಯಲ್ಲಿ ಇಲಾಖೆ ಸಿದ್ಧಪಡಿಸಿರುವ ಕರಡಿನ ಕುರಿತು ವಿವರವಾಗಿ ಚರ್ಚಿಸಲಾಯಿತು. ಸರ್ಕಾರಿ ನೌಕರರ ಸಂಘ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪ್ರೌಢಶಾಲಾ ಶಿಕ್ಷಕರ ಸಂಘಗಳ ಪದಾಧಿಕಾರಿಗಳೂ ಇದ್ದರು. ಬಹುತೇಕ ಮಂದಿ ಕರಡು ನಿರ್ಣಯಕ್ಕೆ ಮೆಚ್ಚುಗೆ ಸೂಚಿಸಿದರು. ವಿಧಾನ ಪರಿಷತ್‌ ಸದಸ್ಯರ ಸಲಹೆ ಪಡೆದ ಬಳಿಕ ಇದನ್ನು ಸಚಿವ ಸಂಪುಟದ ಮುಂದೆ ತರಲಾಗುತ್ತದೆ.
ಇದುವರೆಗೆ ಶಿಕ್ಷಕರ ಸಂಘ ಹಾಗೂ ಸರ್ಕಾರಿ ನೌಕರರ ಸಂಘಗಳ ಪದಾಧಿಕಾರಿಗಳು ವಲಯ ವರ್ಗಾವಣೆಯಿಂದ ವಿನಾಯಿತಿ ಪಡೆಯುತ್ತಿದ್ದರು. ಈ ಕರಡು ನಿಯಮದಲ್ಲಿ ಅದನ್ನು ತೆಗೆದು ಹಾಕಲಾಗಿದೆ. ಪತಿ–ಪತ್ನಿ ಪ್ರಕರಣದಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವವರಿಗೆ ಮಾತ್ರ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ.
ಯಾವುದೇ ವಲಯ ವರ್ಗಾವಣೆಯಲ್ಲಿ ಗುರುತಿಸಿದ ಶಿಕ್ಷಕರ ಹುದ್ದೆಯನ್ನು ಕೋರಿಕೆ ವರ್ಗಾವಣೆಯಲ್ಲಿ ಆಯ್ಕೆ ಮಾಡಿಕೊಳ್ಳದೇ ಇದ್ದಲ್ಲಿ ಅವರನ್ನು ಅದೇ ಹುದ್ದೆಯಲ್ಲಿಯೇ ಮುಂದುವರಿಸಲು ಅವಕಾಶ ಕಲ್ಪಿಸಲಾಗಿದೆ.
ಕ್ಲಸ್ಟರ್‌ ಸಂಪನ್ಮೂಲ ವ್ಯಕ್ತಿ (ಸಿಆರ್‌ಪಿ), ಬ್ಲಾಕ್‌ ಸಂಪನ್ಮೂಲ ವ್ಯಕ್ತಿಗಳು (ಬಿಆರ್‌ಪಿ) ಕನಿಷ್ಠ ಅಥವಾ ಗರಿಷ್ಠ ಅವಧಿ ಪೂರ್ಣಗೊಳಿಸಿದ ನಂತರ ಶಾಲೆಗಳಿಗೆ ಮರು ಸ್ಥಳ ನಿಯುಕ್ತಿಗೊಳಿಸುವಾಗ ಶೇ 20ಕ್ಕಿಂತ ಹೆಚ್ಚು ಖಾಲಿ ಇರುವ ತಾಲ್ಲೂಕುಗಳಿಗೆ ಆದ್ಯತೆಯ ಮೇರೆಗೆ ವರ್ಗಾಯಿಸಬೇಕೆಂಬ ನಿಯಮ ಸಡಿಲಿಸಿ, ತಾಲ್ಲೂಕು ಅಥವಾ ಜಿಲ್ಲೆಯ ಯಾವುದೇ ಹುದ್ದೆಗೆ ಕೌನ್ಸೆಲಿಂಗ್ ಮೂಲಕ ವರ್ಗಾಯಿಸಲಾಗುತ್ತದೆ. ಶಿಕ್ಷಕರ ಕುಂದು–ಕೊರತೆಗಳನ್ನು ಪರಿಹರಿಸಲು ವಿಭಾಗೀಯ ನಿರ್ದೇಶಕರನ್ನು ನಿಯೋಜಿಸಲಾಗುತ್ತದೆ.
ಹೆಚ್ಚುವರಿ ಶಿಕ್ಷಕರನ್ನು ಅಗತ್ಯವಿರುವ ಶಾಲೆಗಳಿಗೆ ಮರುನಿಯುಕ್ತಿಗೊಳಿಸುವಾಗ ಮೊದಲು ತಾಲ್ಲೂಕು ಹಾಗೂ ಬಳಿಕ ಜಿಲ್ಲಾ ಹಂತಕ್ಕೆ ಸೀಮಿತಗೊಳಿಸುವುದು. ವಿನಾಯಿತಿ, ಆದ್ಯತೆ ಪ್ರಕರಣಗಳಲ್ಲಿ ಏಕ ನೀತಿಯನ್ನು ತರಲು ಪ್ರಸ್ತಾಪಿಸಲಾಗಿದೆ.
ಹಿನ್ನೆಲೆ: ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳು (ಶಿಕ್ಷಕರ ವರ್ಗಾವಣಾ ನಿಯಂತ್ರಣ) ಅಧಿನಿಯಮ, 2007ರ ಮೂಲ ಕಾಯ್ದೆಗೆ 2015ರಲ್ಲಿ ಎರಡು ತಿದ್ದುಪಡಿ, 2017 ಮತ್ತು 2018–19ರಲ್ಲಿ ತಲಾ ಒಂದೊಂದು ತಿದ್ದುಪಡಿ ತರಲಾಗಿದೆ. 2017ರಲ್ಲಿ ಜಾರಿಯಲ್ಲಿದ್ದ ನಿಯಮಕ್ಕೆ 2019ರಲ್ಲಿ ಒಂದು ತಿದ್ದುಪಡಿ ತರಲಾಗಿದೆ. ಇದೀಗ ಈ ಕಾಯ್ದೆಯ ಆಶಯವನ್ನೇ ಬಿಂಬಿಸುವ, ಪರಿಷ್ಕೃತ ಕರಡು ಸಿದ್ಧಪಡಿಸಲಾಗಿದೆ.

ವರ್ಗಾವಣೆ ಗೊಂದಲಕ್ಕೆ ಏನು ಕಾರಣ?
ಈ ಮೊದಲಿನ ವರ್ಗಾವಣೆ ನೀತಿಯಲ್ಲಿ ಹಲವು ಅವೈಜ್ಞಾನಿಕ ಅಂಶಗಳಿದ್ದವು. ಘಟಕದೊಳಗಿನ ವರ್ಗಾವಣೆ ಮಿತಿಯನ್ನು ಶೇ 15ಕ್ಕೆ ಮಿತಿಗೊಳಿಸಲಾಗಿತ್ತು, ವಿಶೇಷ ಪ್ರಕರಣಗಳನ್ನೂ ಇದರೊಳಗೆಯೇ ಸೇರಿಸಿದ್ದು ಸಮಸ್ಯೆಗೆ ಕಾರಣವಾಗಿತ್ತು. ಕಡ್ಡಾಯ ವರ್ಗಾವಣೆಯಲ್ಲಿ ಬಹಳಷ್ಟು ಶಿಕ್ಷಕರು ಜಿಲ್ಲೆಯಿಂದ ಹೊರಹೋಗಬೇಕಾಗಿತ್ತು. ನಿವೃತ್ತಿಯ ಅಂಚಿಗೆ ಬಂದ ಶಿಕ್ಷಕರೂ ಕಡ್ಡಾಯ ವರ್ಗಾವಣೆ ಪಟ್ಟಿಯಲ್ಲಿ ಸೇರುವುದರಿಂದ ಬಹಳಷ್ಟು ಸಮಸ್ಯೆ ಎದುರಾಗಿತ್ತು.
ಕರಡಿನಲ್ಲಿ ಸಂಘದ ಎಲ್ಲಾ ಬೇಡಿಕೆಗಳನ್ನು ಪರಿಗಣಿಸಲಾಗಿದೆ. ಇದರಿಂದ ವರ್ಗಾವಣೆ ಪಾರದರ್ಶಕವಾಗಿ ನಡೆಯುವ ವಿಶ್ವಾಸ ಇದೆ
ವಿ.ಎಂ.ನಾರಾಯಣಸ್ವಾಮಿ, ಅಧ್ಯಕ್ಷರು, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ

CLICK PHOT&JOIN: Karnataka government employee's News & Order's exchange Teligram GROUP

CLICK PHOT&JOIN: Karnataka government employee's News & Order's exchange Teligram GROUP
ಬಹಳ ಸದಸ್ಯರ ಒತ್ತಾಯದಮೇರೆಗೆ ಗುಂಪಿಗೆ ಮರುಚಾಲನೆ ನೀಡಲಾಗಿದೆ. ಕೆಟ್ಟ=ಟೀಕೆ,ಟಿಪ್ಪಣಿ,ಸ್ವಗತ ಇಲ್ಲಿ ನಿಷೇಧ, ಎಲ್ಲೋ ಕುಳಿತು ನಿಮ್ಮ ಬೆರಳು/ಯೋಚನೆ ಅಡ್ಮಿನ್ ನಿಯಂತ್ರಣ ಮಾಡಲು ಆಗಲ್ಲ, ಚರ್ಚಿಸುವ ಮುಂಚೆ ಯೋಚಿಸಿ ಪೋಸ್ಟ್ ಮಾಡಿ, ನೀವೂ ತೊಂದರೆಗೆ ಸಿಲುಕಬೇಡಿ, ಅಡ್ಮಿನಿಗೂ ತೊಂದರೆ ಕೊಡಬೇಡಿ. ಆರೋಗ್ಯಕರ ಚರ್ಚೆ, ಸಹಾಯ, ಸ್ನೇಹ ಗುಂಪಿನ ಗುರಿ. ಎಲ್ಲರೂ ಭಾಗವಹಿಸಲು ಪೋಸ್ಟ್ ಮಾಡುವ ಅವಕಾಶ ನೀಡಲಾಗಿದೆ. ನಿಯಮ ಮೀರುವ ಸದಸ್ಯರನ್ನು ಮುಲಾಜಿಲ್ಲದೇ ಹೊರಹಾಕಿ ಬ್ಲಾಕ್ ಮಾಡಲಾಗುವುದು ಇದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸುದ್ದಿ ಆದೇಶ ವಿನಿಮಯ ಟೆಲಿಗ್ರಾಂ ಗುಂಪಿನ ಆಹ್ವಾನ ಕೊಂಡಿ. ಮೇಲಿನ ಫೋಟೋ ಬೆರಳಿಂದ ತಟ್ಟುವ ಮುಖಾಂತರ ಗುಂಪಿಗೆ ನೀವೇ ಸೇರ್ಪಡೆ ಆಗಬಹುದು. ತಟ್ಟುವ ಮುಂಚೆ ಟೆಲಿಗ್ರಾಂ ಆಪ್ ಹಾಕಿಕೊಂಡು ತಟ್ಟಿ.